ಮುಸುಕುಧಾರಿಯೊಬ್ಬ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನಿಸಿ ಕೊನೆಗೆ ಹೆದರಿ ದೇವರಿಗೆ ಕೈ ಮುಗಿದು ಮರಳಿ ಹೋಗಿರುವ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕದಲೂರು ಗ್ರಾಮದಲ್ಲಿ ಈ ಘನಟೆ ನಡೆದಿದೆ. ಮುಸುಕುಧಾರಿ ಕಳ್ಳನೊಬ್ಬ ದೇವಸ್ಥಾನದ ಹುಂಡಿ ಹಣ ಕಳ್ಳತನಕ್ಕೆ ಯತ್ನಿಸಿದ್ದ. ಅಂತಿಮ ಕ್ಷಣದಲ್ಲಿ ಕಳ್ಳತನಕ್ಕೆ ಹೆದರಿ ದೇವರಿಗೆ ಕೈ ಮುಗಿದು ಮರಳಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗ್ರಾಮದ ಪಟ್ಟಲದಮ್ಮ ದೇಗಲ ಕಳ್ಳತನಕ್ಕೆ ಕಳ್ಳ ಯತ್ನಿಸಿದ್ದ. ಕೆಸ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.