ಬೆಂಗಳೂರು: ಶಿಕ್ಷಕಿಯೊಬ್ಬರು ಮಗುವಿನ ಹಲ್ಲು ಮುರಿಯುವಂತೆ ಥಳಿಸಿರುವ ಘಟನೆ ನಗರದಲ್ಲಿ ನಡೆದಿದೆ.
ಈ ಘಟನೆ ಇಲ್ಲಿಯ ಜಯನಗರದ ಹೋಲಿ ಕ್ರಿಸ್ಟ್ ಶಾಲೆಯಲ್ಲಿ ನಡೆದಿದೆ. ಮಗು ನೀರಿನಲ್ಲಿ ಆಟವಾಡುತ್ತಿದೆ ಎಂಬ ಕಾರಣಕ್ಕೆ ಕೋಪಗೊಂಡ ಶಿಕ್ಷಕಿ ಮಗುವಿನ ಕಪಾಳಕ್ಕೆ ಕಟ್ಟಿಗೆಯಿಂದ ಹೊಡೆದಿದ್ದಾರೆ. ಹೀಗಾಗಿ ಮಗುವಿನ ಹಲ್ಲು ಮುರಿದಿದೆ. ಹಿಂದಿ ಶಿಕ್ಷಕಿ ಅಜ್ಮತ್ ಎಂಬುವವರು 6ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಯ ಮುಖಕ್ಕೆ ಹೊಡೆದಿದ್ದಾರೆ ಎನ್ನಲಾಗಿದೆ.
ಸದ್ಯ ಮಗು ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಶಿಕ್ಷಕಿ ಅಜ್ಮತ್ ವಿರುದ್ಧ ವಿದ್ಯಾರ್ಥಿ ಅಶ್ವಿನ್ ತಂದೆ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಲ್ಲದೇ, ಶಿಕ್ಷಕಿ ಕೂಡ ವಿದ್ಯಾರ್ಥಿಯ ಪೋಷಕರ ವಿರುದ್ಧ ದೂರು ದಾಖಲಿಸಿದ್ದಾರೆ. ಪೋಷಕರು ನನ್ನ ಜಾತಿ ಯಾವುದೆಂದು ಕೇಳಿ ಗಲಾಟೆ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ.
ಊಟ ಮುಗಸಿಕೊಂಡು ಹೋಗಾವಗ ವಿದ್ಯಾರ್ಥಿಗಳು ಗಲಾಟೆ ಮಾಡಿಕೊಂಡಿದ್ದರು. ವಿದ್ಯಾರ್ಥಿಗಳೇ ಹೊಡೆದಾಡಿಕೊಂಡಿದ್ದಾರೆ. ಈ ವೇಳೆಯೇ ಹಲ್ಲು ಮುರಿದಿದೆ. ವಿದ್ಯಾರ್ಥಿಗೆ ನಾನು ಏನು ಮಾಡಿಲ್ಲ. ಗಲಾಟೆ ನಿಯಂತ್ರಿಸಲು ಕೈಗೆ ಒಂದು ಏಟು ಕೊಟ್ಟಿದ್ದೆ ಅಷ್ಟೇ ಎದು ಶಿಕ್ಷಕಿ ಹೇಳಿದ್ದಾರೆ.