ಬಳ್ಳಾರಿ: ಇಡಿ ದಾಳಿಯ ವಿಷಯವಾಗಿ ಕಾಂಗ್ರೆಸ್ (Congress) ಶಾಸಕ ನಾರಾ ಭರತ್ ರೆಡ್ಡಿ (Nara Bharat Reddy) ಮಾತನಾಡಿದ್ದಾರೆ.
ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರ ನಿವಾಸಗಳ ಮೇಲೆ ದಾಳಿ ನಡೆಸಿರುವ ಇಡಿ, ಹಲವು ದಾಖಲೆಗಳನ್ನು ವಶಕ್ಕೆ ಪಡೆದಿವೆ. ನಾರಾ ಭರತ್ ರೆಡ್ಡಿ ಅವರ ನಿವಾಸದ ಮೇಲೆ ಕೂಡ ದಾಳಿ ನಡೆದಿತ್ತು. ಈ ವಿಷಯವಾಗಿ ಅವರು ಮಾತನಾಡಿದ್ದಾರೆ. ಇಡಿ ಅಧಿಕಾರಿಗಳು ಹಲವಾರು ಪ್ರಶ್ನೆಗಳನ್ನು ಕೇಳಿದ್ದರು. ನಮ್ಮ ವ್ಯವಹಾರ, ವಾಲ್ಮೀಕಿ ನಿಗಮದ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿರುವುದಾಗಿ ಹೇಳಿದ್ದಾರೆ.
ನಾನು ಅವರ ವಿಚಾರಣೆಗೆ ಸಹಕಾರ ನೀಡಿದ್ದೇನೆ. ಪಂಚನಾಮೆ ಸಂದರ್ಭದಲ್ಲಿ ಏನೂ ವಶಪಡಿಸಿಕೊಂಡಿಲ್ಲ ಎಂದು ಹೇಳಿದ್ದಾರೆ. ಆದರೆ, ಕೋಟಿ ಕೋಟಿ ಹಣ ಸಿಕ್ಕಿದೆ ಎಬುವುದು ಸುಳ್ಳು. ಇದೆಲ್ಲ ವಿರೋಧಿಗಳ ಷಡ್ಯಂತ್ರ ಎಂದಿದ್ದಾರೆ.