ಬೆಂಗಳೂರು: ನಗರದಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್ ಬರ್ಬರ ಹತ್ಯೆಯಾಗಿರುವ ಘಟನೆ ನಡೆದಿದೆ.
ಪುನೀತ್ @ ನೇಪಾಳಿ ಕೊಲೆಯಾಗಿರುವ ರೌಡಿಶೀಟರ್ ಎನ್ನಲಾಗಿದೆ. ಕಾಡುಗೋಡಿಯ ವಿಜಯ ಲಕ್ಷ್ಮಿ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಮಚ್ಚು ಲಾಂಗ್ ನಿಂದ ಕೊಚ್ಚಿ ರೌಡಿಶೀಟರ್ ಕೊಲೆ ಮಾಡಲಾಗಿದೆ. ಕೊಲೆಗೆ ನಿಖರ ಕಾರಣ ಹಾಗೂ ಇದರ ಹಿಂದೆ ಯಾರಿದ್ದಾರೆ ಎಂಬುವುದು ಇನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ಕಾಡುಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.