ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಡೆಡ್ಲಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನ ಹೆಡೆಮುರಿ ಕಟ್ಟಲು ಬೆಂಗಳೂರು ಪೊಲೀಸರು ಫೀಲ್ಡ್ಗೆ ಇಳಿದಿದ್ದಾರೆ. ರಾತ್ರಿ ಕಾರ್ಯಾಚರಣೆ ನಡೆಸಿ ಮೂವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ.
ಆರ್ಸಿಬಿ ಮ್ಯಾನೇಜ್ಮೆಂಟ್ನ ಓರ್ವ ಹಾಗೂ ಡಿಎನ್ಎ ಸಂಸ್ಥೆಯ ಇಬ್ಬರನ್ನ ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ. ಆರ್ಸಿಬಿ ಟೀಂನ ಮಾರ್ಕೆಟಿಂಗ್ ಹೆಡ್ ನಿಖಿಲ್ ಸೋಸಲೆ, ಡಿಎನ್ಎ ಸಂಸ್ಥೆಯ ಕಿರಣ್ ಮತ್ತು ಸುಮಂತ್ ಎಂಬುವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
ಆರ್ ಸಿಬಿ ವಿಕ್ಟರಿ ಪರೇಡ್ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಗೇಟ್ 3ರ ಮುಂದೆ ಬುಧುವಾರ ನಡೆದ ಕಾಲ್ತುಳಿತದಲ್ಲಿ 11 ಮಂದಿ ಪ್ರಾಣ ಕಳೆದುಕೊಂಡಿದ್ದರು. ಹೀಗಾಗಿ ಸರ್ಕಾರ ಪೊಲೀಸ್ ಕಮಿಷನರ್ ಸೇರಿ ಐವರು ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ಆರ್ ಸಿಬಿ ಮ್ಯಾನೇಜ್ಮೆಂಟ್ ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.