ಬಳ್ಳಾರಿ: ಇಲ್ಲಿನ ಜಿಲ್ಲಾ ಅಸ್ಪತ್ರೆಯಲ್ಲಿನ ಅವಾಂತರಗಳು ಆಗಾಗ ಬೆಳಕಿಗೆ ಬರುತ್ತಲೇ ಇದ್ದವು. ಈಗ ಮತ್ತೊಂದು ಅವಾಂತರ ಬೆಳಕಿಗೆ ಬಂದಿದೆ.
ಒಂದೇ ಸಿಸೇರಿಯನ್ ಗೆ ಒಳಗಾದ ಮೂವರು ಬಾಣಂತಿಯರು ಸಾವನ್ನಪ್ಪಿ, ನಾಲ್ವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಹಲವಾರು ಅನುಮಾನಕ್ಕೆ ದಾರಿ ಮಾಡಿ ಕೊಟ್ಟಿದೆ.
ನ. 9 ರಂದು ಸಿಸೇರಿಯನ್ (Cesarean)ಗೆ ಮೂವರು ಬಾಣಂತಿಯರು ಒಳಗಾಗಿದ್ದರು. ಆದರೆ ಅವರು ಸಾವನ್ನಪ್ಪಿದ್ದಾರೆ. ನ. 9 ರಂದು ಏಳು ಜನ ಗರ್ಭಿಣಿಯರು ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ (Ballari District Hospital) ಸಿಸೇರಿಯನ್ ಮಾಡಿಸಿಕೊಂಡಿದ್ದರು. ಆದರೆ, ಈಗ ಸಿಸೇರಿಯನ್ ಗೆ ಒಳಗಾದ ಬಾಣಂತಿಯರ ಪೈಕಿ ನ.10 ರಂದು ನಂದಿನಿ ಮತ್ತು ಲಲಿತಮ್ಮ ಸಾವನ್ನಪ್ಪಿದ್ದಾರೆ. ನ. 13 ರಂದು ರೋಜಮ್ಮ ಸಾವನ್ನಪ್ಪಿದ್ದಾರೆ. ಅಲ್ಲದೇ, ಇನ್ನುಳಿದ ನಾಲ್ವರು ಬಾಣಂತಿಯರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆದರೆ, ಈ ಬಾಣಂತಿಯರ ಸಾವಿಗೆ ನಿಜವಾದ ಕಾರಣ ತಿಳಿದು ಬಂದಿಲ್ಲ. KSMSCL ಕಳುಹಿಸಿದ್ದ ಗ್ಲುಕೋಸ್ಗಳೇ ಇದಕ್ಕೆಲ್ಲಾ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಆದರೆ, ಇದುವರೆಗೂ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ, ಮೂವರು ಬಾಣಂತಿಯರ ಶಿಶುಗಳು ಮಾತ್ರ ಆರೋಗ್ಯವಾಗಿವೆ. ಇದರಿಂದಾಗಿ ಕುಟುಂಸ್ಥರು ಕಣ್ಣೀರು ಸುರಿಸುವಂತಾಗಿದೆ. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಲಿದೆಯೇ ಕಾಯ್ದು ನೋಡಬೇಕಿದೆ.