ಥಗ್ ಲೈಫ್ ಸಿನಿಮಾ ರಿಲೀಸ್ ವಿಚಾರವಾಗಿ ಹೈ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ನ್ಯಾ. ನಾಗಪ್ರಸನ್ನ ಅವರು ಮತ್ತೆ ಕಮಲ್ ಹಾಸನ್ ಕ್ಷಮೆ ಬಗ್ಗೆ ಪ್ರಶ್ನೆ ಮಾಡಿದ್ದಾರೆ.
ಇನ್ನೂ ಕಮಲ್ ಹಾಸನ್ ಕ್ಷಮೆ ಕೇಳಲಿಲ್ವಾ? ಸುಪ್ರೀಂ ಕೋರ್ಟ್ ವಿಚಾರಣೆ ಏನಾಯ್ತು? ಎಂದು ಜಡ್ಜ್ ಕೇಳಿದ್ದಾರೆ. ಕ್ಷಮೆ ಕೇಳಿಲ್ಲ. ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿರ ಮಾಡಿದೆ ಎಂದು ಕಮಲ್ ಪರ ವಕೀಲರು ಹೇಳಿದ್ದಾರೆ. ಈ ವೇಳೆ ಕನ್ನಡ ಸಾಹಿತ್ಯ ಪರಿಷತ್ ತಮ್ಮ ವಾದ ಆಲಿಸುವಂತೆ ಅರ್ಜಿ ಸಲ್ಲಿಸಿದೆ. ಕಮಲ ಹಾಸನ್ ಸ್ಟುಪಿಡ್ ಸ್ಟೇಟ್ ಮೆಂಟ್ ನೀಡಿದ್ದಾರೆ. ಕರ್ನಾಟಕ, ಕನ್ನಡ ಪದ ಪುರಾಣಗಳಲ್ಲೂ ಬಳಕೆಯಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಪರ ಹಿರಿಯ ವಕೀಲ ಎಸ್. ಬಸವರಾಜ್ ವಾದಿಸಿದರು.
ಸ್ಟುಪಿಡ್ ಪದ ಬಳಕೆಗೆ ಕಮಲ್ ಫಿಲ್ಮ್ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ಆನಂತರ ಸ್ಟುಪಿಡ್ ಹೇಳಿಕೆಗೆ ಕನ್ನಡ ಸಾಹಿತ್ಯ ಪರ ವಕೀಲರು ವಿಷಾದ ವ್ಯಕ್ತಪಡಿಸಿದರು. ಕನ್ನಡ ಸಾಹಿತ್ಯ ಪರಿಷತ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವುದಾಗಿ ವಕೀಲರು ಹೇಳಿದ್ದಾರೆ. ವಿಚಾರಣೆಯನ್ನು ಹೈಕೋರ್ಟ್ ಜೂನ್ 20ಕ್ಕೆ ಮುಂದೂಡಿದೆ.