ಬೆಂಗಳೂರು: ಮಳೆಯಿಂದಾಗಿ ಇಡೀ ಬೆಂಗಳೂರು ಒದ್ದಾಡುತ್ತಿದೆ. ಎಲ್ಲೆಂದರಲ್ಲಿ ಮರಗಳು ಧರೆಗೆ ಉರುಳುತ್ತಿವೆ. ಬಿಟಿಎಂ ಲೇಔಟ್ ನ ಎರಡನೇ ಹಂತದಲ್ಲಿ ವಿದ್ಯುತ್ ಕಂಬದ ಮೇಲೆ ಮರ ಮುರಿದು ಬಿದ್ದಿದ್ದು, ಅದೃಷ್ಟವಶಾತ್ ಯಾರಿಗೂ ಸಮಸ್ಯೆಯಾಗಿಲ್ಲ. ಕೂಡಲೇ ಸ್ಥಳೀಯರು ಹಾಗೂ ಬಿಬಿಎಂಪಿ ಸಿಬ್ಬಂದಿ ಸ್ಥಳಕ್ಕಾಗಮಿಸಿದ್ದು, ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಈಗಾಗಲೇ ಬೆಂಗಳೂರು ಮಳೆಗೆ ಮೂವರು ಮಳೆಗೆ ಮೂವರು ಬಲಿಯಾಗಿದ್ದಾರೆ.
ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿ ಸಾಕಷ್ಟು ಅವಾಂತರ ಸೃಷ್ಟಿಯಾಗುವಂತೆ ಮಾಡಿದೆ. ಮತ್ತೊಂದೆಡೆ ವ್ಯಾಪರ- ವಹಿವಾಟು ಕೂಡ ನೆಲ ಕಚ್ಚಿದೆ. ಕೆ.ಆರ್. ಮಾರುಕಟ್ಟೆ, ಯಶವಂಪುರ ಮಾರುಕಟ್ಟೆಗಳಲ್ಲಿ ವ್ಯಾಪಾರ ತಗ್ಗಿದೆ. ಹೂವು, ಹಣ್ಣು, ತರಕಾರಿ ಖರೀದಿಗೆ ಜನ ಬರುತ್ತಿಲ್ಲ. ಹೀಗಾಗಿ ವ್ಯಾಪಾರ ಇಲ್ಲದೆ ವ್ಯಾಪಾರಸ್ಥರು ಕಂಗಾಲಾಗಿದ್ದಾರೆ. ವ್ಯಾಪಾರಿ ಪ್ರಮುಖ ಕೇಂದ್ರ ಚಿಕ್ಕಪೇಟೆಯಲ್ಲಿಯೂ ವ್ಯಾಪರ ವಹಿವಾಟು ಕುಸಿತಗೊಂಡಿದೆ. ಅಲ್ಲಲ್ಲಿ ಮರಗಳು ಉರುಳಿ ಬೀಳುತ್ತಿರುವುದು ಕೂಡ ವಾಹನ ಸವಾರರ ಭಯಕ್ಕೆ ಕಾರಣವಾಗುತ್ತಿದೆ.