ಬೆಂಗಳೂರು: ಗಾಂಧಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇಬ್ಬರು ಪಾಲಿಕೆ ನೌಕರರನ್ನು ಅಮಾನತು ಮಾಡಲಾಗಿದೆ.
ಸಚಿವ ದಿನೇಶ್ ಗುಂಡೂರಾವ್ ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಕೃಷ್ಣ ಎಂಬ ಪಾಲಿಕೆ ನೌಕರ ಗಾಂಧಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮೂರು ಪಾಳಿಗಳಲ್ಲಿ ತ್ಯಾಜ್ಯ ವಿಲೇವಾರಿ ಕಾರ್ಯ ನಿರ್ವಹಿಸುತ್ತಿರುವುದಾಗಿ ದಾಖಲೆಗಳನ್ನು ಸೃಷ್ಟಿಸಿ, ತನ್ನ ಹೆಂಡತಿ ಸುನಿತಾ E. K. ಮತ್ತು ತನ್ನ ಭಾವಮೈದುನ ಚಂದ್ರಶೇಖರ್ E. K. ರವರ ಹೆಸರಿನಲ್ಲಿ ನಿಯಮಬಾಹಿರವಾಗಿ ಕಾರ್ಯಾದೇಶ ಪತ್ರಗಳನ್ನು ಪಡೆದು, ಪ್ರತಿ ತಿಂಗಳು ಹತ್ತಾರು ಲಕ್ಷ ರೂಪಾಯಿಗಳಷ್ಟು ಹಣವನ್ನು ಪಾಲಿಕೆಯಿಂದ ಅಕ್ರಮವಾಗಿ ಪಡೆಯುತ್ತಿದ್ದ ಎನ್ನಲಾಗಿದೆ.
ಪಾಲಿಕೆಯ ಪಶ್ಚಿಮ ವಲಯದ ವಲಯ ಆಯುಕ್ತರ ಕಚೇರಿಯಲ್ಲಿ ಮತ್ತು ಗಾಂಧಿನಗರ ವಿಭಾಗದ ಕಾಮಗಾರಿ ಇಲಾಖೆ, ಆರೋಗ್ಯ ಇಲಾಖೆ ಮತ್ತು ಘನ ತ್ಯಾಜ್ಯ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬಹುತೇಕ ಅಧಿಕಾರಿ / ನೌಕರರ ವಿರುದ್ಧ ಜಾತಿ ನಿಂದನೆ ಪ್ರಕರಣಗಳನ್ನು ದಾಖಲಿಸಿ ಬ್ಲಾಕ್ ಮೇಲ್ ಮಾಡುತ್ತಿದ್ದ ಎಂಬ ಆರೋಪ ಕೂಡ ಕೇಳಿ ಬಂದಿದೆ.
ಹೀಗಾಗಿ ಆತನನ್ನು ಅಮಾನತು ಮಾಡಲಾಗಿದೆ. ಅದೇ ರೀತಿ ಪಶ್ಚಿಮ ವಲಯದ ಉಪ ಹಣಕಾಸು ನಿಯಂತ್ರಕರ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿರುವ “ಲೋಕೇಶ್ವರಿ” ಎಂಬಾಕೆ ತನ್ನ ಪತಿ ರಾಮಚಂದ್ರ, ಮಾವ ಮುನಿಯಪ್ಪ ವಿ., ನಾದಿನಿ ವರಲಕ್ಷ್ಮಿ ಮತ್ತು ರಕ್ತ ಸಂಬಂಧಿ ನಿತ್ಯಾ ಸಿ. ಎಂಬುವವರ ಳ ಹೆಸರಿನಲ್ಲಿ ತ್ಯಾಜ್ಯ ವಿಲೇವಾರಿ ಕಾರ್ಯ ನಿರ್ವಹಿಸುವ ಕಾರ್ಯಾದೇಶ ಪತ್ರಗಳನ್ನು ಪಡೆದು ಪ್ರತಿ ತಿಂಗಳು ಹತ್ತಾರು ಲಕ್ಷ ರೂಪಾಯಿಗಳನ್ನು ವಂಚಿಸುತ್ತಿದ್ದ ಬಗ್ಗೆ ದಾಖಲೆಗಳ ಸಹಿತ ದೂರುಗಳನ್ನು ನೀಡಲಾಗಿತ್ತು.