ಬೆಂಗಳೂರು: ಕೇಂದ್ರ ಸಚಿವ ಅಮಿತ್ ಶಾ ಇಂದು ರಾಜ್ಯಕ್ಕೆ ಬರುತ್ತಾರೆಂಬ ನಿರೀಕ್ಷೆ ಇತ್ತು. ಆದರೆ, ದಿಢೀರ್ ಪ್ರವಾಸ ರದ್ದು ಮಾಡಿದ್ದಾರೆ.
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗನ ಮದುವೆಗೆ ಅಮಿತ್ ಶಾ ಆಗಮಿಸಬೇಕಿತ್ತು. ಆದರೆ, ಏಕಾಏಕಿ ಪ್ರವಾಸ ರದ್ದುಗೊಳಿಸಿಕೊಂಡಿದ್ದಾರೆ. ಆದರೆ, ಇದಕ್ಕೆ ಕಾರಣ ತಿಳಿದು ಬಂದಿಲ್ಲ. ಭೇಟಿ ರದ್ದು ಬಗ್ಗೆ ಕೇಂದ್ರ ಗೃಹ ಸಚಿವಾಲಯದಿಂದ ರಾಜ್ಯ ನಾಯಕರಿಗೆ ಮಾಹಿತಿ ನೀಡಲಾಗಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ಮಣಿಪುರದಲ್ಲಿ ಮತ್ತೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಅಲ್ಲದೇ, ಬೆಂಗಳೂರಿನಲ್ಲಿ ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಉಂಟಾಗಿ 11 ಜನ ಸಾವನ್ನಪ್ಪಿದ್ದಾರೆ. ಬಿಜೆಪಿಯಿಂದ ಪ್ರತಿಭಟನೆ ನಡೆಯುತ್ತಿದೆ. ಈ ಮಧ್ಯೆ ಶಾ ಪ್ರವಾಸ ರದ್ದಾಗಿರುವುದು ಚರ್ಚೆಗೆ ಕಾರಣವಾಗಿದೆ.