ಐಪಿಎಲ್ ಪಂದ್ಯಗಳ ಮೇಲೆ ಯುದ್ಧದ ಕಾರ್ಮೋಡ ಆವರಿಸಿದೆ. ಭಾರತ-ಪಾಕಿಸ್ತಾನ ನಡುವೆ ಯುದ್ಧ ಆರಂಭವಾಗಿರುವ ಬೆನ್ನಲ್ಲೇ ಈ ಬಾರಿಯ ಐಪಿಎಲ್ ಪಂದ್ಯಗಳನ್ನು ರದ್ದು ಮಾಡುವ ಬಗ್ಗೆ ಚಿಂತನೆ ಶುರುವಾಗಿದೆ. ನಿನ್ನೆ ಧರ್ಮಶಾಲಾದಲ್ಲಿ ನಡೆದಿದ್ದ ಡೆಲ್ಲಿ ಮತ್ತು ಪಂಜಾಬ್ ನಡುವಿನ ಪಂದ್ಯವನ್ನು ಅರ್ಧಕ್ಕೆ ಮೊಟಕುಗೊಳಿಸಿ, ಪ್ರೇಕ್ಷಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು.
ಪಾಕ್ ದಾಳಿ ಭೀತಿ ಹಿನ್ನೆಲೆಯಲ್ಲೇ ಮೈದಾನದ ದೀಪಗಳನ್ನು ದಿಢೀರ್ ಬಂದ್ ಮಾಡುವ ಮೂಲಕ ಪಂದ್ಯವನ್ನು ರದ್ದು ಮಾಡಲಾಯಿತು. ಭಾರತೀಯ ಸೇನೆಯ ಸೂಚನೆ ಮೇರೆಗೆ ನಿನ್ನೆಯ ಪಂದ್ಯವನ್ನು ರದ್ದು ಮಾಡಲಾಗಿತ್ತು. ಇನ್ನು ಈ ಭಾಗದಲ್ಲಿ ವಿಮಾನ ಸಂಚಾರ ರದ್ದಾಗಿರುವ ಹಿನ್ನೆಲೆಯಲ್ಲಿ ಇಂದು ಎಲ್ಲ ಆಟಗಾರರನ್ನು ವಿಶೇಷ ರೈಲಿನ ಮೂಲಕ ದೆಹಲಿಗೆ ಸ್ಥಳಾಂತರಿಸಲಾಗುತ್ತಿದೆ.
ಧರ್ಮಶಾಲಾದಿಂದ 85 ಕಿಲೋಮೀಟರ್ ರಸ್ತೆ ಮಾರ್ಗವಾಗಿ ಪಠಾಣ್ ಕೋಟೆಗೆ ಪ್ರಯಾಣಿಸಿ ಬಳಿಕ ಅಲ್ಲಿಂದ ಎಲ್ಲ ಆಟಗಾರರು, ಕೋಚ್ ಗಳು, ತರಬೇತಿ ಸಿಬ್ಬಂದಿ ಬಿಸಿಸಿಐ ವ್ಯವಸ್ಥೆ ಮಾಡಿರುವ ವಿಶೇಷ ರೈಲಿನಲ್ಲಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಕೇಂದ್ರ ಗೃಹ ಸಚಿವಾಲಯದೊಟ್ಟಿಗೆ ಚರ್ಚಿಸಿ ಐಪಿಎಲ್ ಮುಂದುವರಿಸೋ ಬಗ್ಗೆ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎನ್ನಲಾಗುತ್ತಿದೆ.