ಬೆಂಗಳೂರು: ನಗರದಲ್ಲಿ ಮಳೆಯಿಂದ ಆಗುತ್ತಿರುವ ಅವಾಂತರಗಳ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಾತನಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮಳೆಯಿಂದಾಗಿ ಸಿಲ್ಕ್ ಬೋರ್ಡ್ ಬಳಿ ಸಾಕಷ್ಟು ಸಮಸ್ಯೆಯಾಗಿದೆ. ಈ ಕರಿತು ಬಿಬಿಎಂಪಿ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ವೈಟ್ ಟಾಪಿಂಗ್ ಆಗುತ್ತಿರುವುದರಿಂದ ಕೂಡ ಸಮಸ್ಯೆಯಾಗಿದೆ. ಬಿಬಿಎಂಪಿ ಕಮಿಷನರ್ ಸ್ಪಾಟ್ ಗೆ ಹೋಗಿದ್ದಾರೆ. ಸೂಚನೆ ಕೊಟ್ಟಿದ್ದಾರೆ. ಮಳೆಗಾಲದಲ್ಲಿ ಮುನ್ನಚ್ಚರಿಕಾ ಕ್ರಮ ತೆಗೆದುಕೊಳ್ಳಬೇಕು. ಅದನ್ನು ಡಿಸಿಎಂ ಮಾಡುತ್ತಿದ್ದಾರೆ. ಈಗಾಗಲೇ ಅವರು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ಅಧಿಕಾರಿಗಳು ಸಮಸ್ಯೆ ಬಗೆ ಹರಿಸುತ್ತಿದ್ದಾರೆ ಎಂದಿದ್ದಾರೆ.
ಡಿಸಿಎಂ ಉಸ್ತುವಾರಿ ಇದ್ದಾರೆ. ಈಗಾಗಲೇ ಸೂಚನೆ ಕೊಟ್ಟಿದ್ದಾರೆ. ಸಮಸ್ಯೆಯನ್ನು ಅಧಿಕಾರಿಗಳು ನೋಡುತ್ತಿದ್ದಾರೆ. ಮೇ, ಜೂನ್ ನಲ್ಲಿ ಪ್ರತಿ ವರ್ಷ ಸಮಸ್ಯೆ ಆಗುತ್ತದೆ. ಮುನ್ನಚ್ಚರಿಕಾ ಕ್ರಮ ವಹಿಸಿದರೆ ಸಮಸ್ಯೆ ಆಗುವುದಿಲ್ಲ. ಲೋ ಲೆವಲ್ ಏರಿಯಾದಲ್ಲಿ ಸಮಸ್ಯೆ ಆಗುತ್ತದೆ ಎಂದಿದ್ದಾರೆ.
ತುಮಕೂರಿಗೆ ಮೆಟ್ರೋ ವಿಚಾರದ ಬಗ್ಗೆ ಕೆಲ ನಾಯಕರ ವಿರೋಧದ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ತುಮಕೂರಿಗೆ ಮೆಟ್ರೋ ಬಂದರೆ ಬೆಂಗಳೂರಿನ ಫ್ರೆಷರ್ ಕಡಿಮೆ ಆಗುತ್ತದೆ. ನಾವು ಹಲವು ಬಾರಿ ಹೇಳಿದ್ದೇವೆ. ಬಜೆಟ್ ನಲ್ಲೂ ಅನೌನ್ಸ್ ಮಾಡಿದರು. ಅದರಂತೆ ಅವರು ವರದಿ ಕೊಟ್ಟಿದ್ದಾರೆ. ಬೆಂಗಳೂರಿನ ಸಂಸದರು ವಿರೋಧ ವ್ಯಕ್ತಪಡಿಸಿದ್ದಾರೆ.
ಸ್ಟುಪಿಡ್ ಅಂತ ಹೇಳಿದ್ದಾರೆ. ಅವರು ಯಾಕೆ ಹೀಗೆ ಹೇಳಿದ್ದಾರೆ ಅಂತ ಗೊತ್ತಿಲ್ಲ. ಸೋಮಣ್ಣ ಕೂಡ ನಮ್ಮ ಸಂಸದರು. ಅವರಿಗೆ ತುಮಕೂರಿನ ಸಮಸ್ಯೆ ಅರ್ಥವಾಗುತ್ತಿದೆ. ಮೆಟ್ರೋ ಬೇಕು ಎಂದು ಸೋಮಣ್ಣ ಅವರಿಗೆ ಅರ್ಥವಾಗಿದೆ. ನಿತ್ಯವೂ ಜನ ಸಫರ್ ಪಡುತ್ತಿದ್ದಾರೆ. ಅದಕ್ಕೆ ಪರಿಹಾರ ನೀಡಬೇಕು ಎಂದಿದ್ದಾರೆ.