ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಬಹು ನಿರೀಕ್ಷಿತ ’45” ಚಿತ್ರದ ಟೀಸರ್ ಗೆ ಅಭಿಮಾನಿಗಳು ಏನಂದ್ರು?

March 31, 2025
Share on WhatsappShare on FacebookShare on Twitter

ಬೆಂಗಳೂರು: ಯುಗಾದಿ ಹಬ್ಬದಂದು ಬಹು ನಿರೀಕ್ಷಿತ 45 ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಅಭಿಮಾನಿಗಳು ಮೆಚ್ಚಿಕೊಳ್ಳುತ್ತಿದ್ದಾರೆ.

ರಮೇಶ್ ರೆಡ್ಡಿ ನಿರ್ಮಾಣದ, ಅರ್ಜುನ್ ಜನ್ಯ ನಿರ್ದೇಶನದ ಹಾಗೂ ಶಿವರಾಜ್ ಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ ಅಭಿನಯದ ಬಹುನಿರೀಕ್ಷಿತ “45” ಚಿತ್ರದ ಟೀಸರ್ ಯುಗಾದಿ ಹಬ್ಬದಂದು ಬಿಡುಗಡೆ ಮಾಡಲಾಯಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಟೀಸರ್ ಅನಾವರಣ ಮಾಡಿದರು. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಟೀಸರ್ ಸಾಕಷ್ಟು ಕುತೂಹಲ ಮೂಡಿಸಿದೆ. ಈಗ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು ಮೆಚ್ಚುಗೆ ವ್ಯಕ್ತವಾಗುತ್ತಿದೆ. ಟೀಸರ್ ಬಿಡುಗಡೆ ನಂತರ ಸುದ್ದಿಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಿವರಾಜ್ ಕುಮಾರ್, ಡಿ.ಕೆ.ಡಿ ರಿಯಾಲಿಟಿ ಶೋ ಮಾಡುತ್ತಿದ್ದ ಸಮಯದಲ್ಲಿ ಅರ್ಜುನ್ ಜನ್ಯ 4 ರಿಂದ 5 ನಿಮಿಷದಲ್ಲಿ ಈ ಚಿತ್ರದ ಕಥೆ ಹೇಳಿದರು. ಕಥೆ ಕೇಳಿ ಥ್ರಿಲ್ ಆದೆ. ಕಥೆ ಕೊಟ್ಟು ಬಿಡುತ್ತೇನೆ. ಯಾರಾದರೂ ನಿರ್ದೇಶನ ಮಾಡಲಿ ಎಂದು ಅರ್ಜುನ್ ಜನ್ಯ ಹೇಳಿದರು. ನೀವು ಕಥೆ ಚೆನ್ನಾಗಿ ಹೇಳಿದ್ದೀರಾ. ನೀವೇ ನಿರ್ದೇಶನ ಮಾಡಿ ಅಂದೆ. ನಂತರ ನಿರ್ಮಾಣಕ್ಕೆ ನಿರ್ಮಾಪಕ ರಮೇಶ್ ರೆಡ್ಡಿ ಮುಂದಾದರು. “ಪ್ರೀತ್ಸೆ”, “ಲವ ಕುಶ” ಚಿತ್ರಗಳಲ್ಲಿ ನಟ ಉಪೇಂದ್ರ ಜೊತೆ ನಟಿಸಿದ್ದೆ. ಈಗ ಮತ್ತೆ ಅವರೊಂದಿಗೆ ಅಭಿನಯಿಸಿದ್ದೇನೆ. ರಾಜ್ ಬಿ ಶೆಟ್ಟಿ ಅವರ ಜೊತೆಗೆ ಇದು ಮೊದಲ ಚಿತ್ರ. ಎಲ್ಲಾ ಕಲಾವಿದ ಹಾಗೂ ತಂತ್ರಜ್ಞರ ಕಾರ್ಯವೈಖರಿ ತುಂಬಾ ಚೆನ್ನಾಗಿದೆ ಎಂದು ಹೇಳಿದ್ದಾರೆ.

“45” ಚಿತ್ರ ಬರೀ ಕರ್ನಾಟಕದಲ್ಲಿ ಮಾತ್ರವಲ್ಲ. ಭಾರತದಾದ್ಯಂತ ಹೆಸರು ಮಾಡುವ ಚಿತ್ರವಾಗಲಿದೆ. ಈ ಚಿತ್ರವನ್ನು ಬೇರೆಯವರು ನಿರ್ದೇಶನ ಮಾಡಿದ್ದರೆ ಕನ್ನಡಕ್ಕೆ ಸಿಗುತ್ತಿದ್ದ ಒಳ್ಳೆಯ ನಿರ್ದೇಶಕನನ್ನು ಕಳೆದುಕೊಳ್ಳುತ್ತಿದ್ದೆವು ಎಂದರು.

ನಟ ಉಪೇಂದ್ರ ಮಾತನಾಡಿ, ಒಳ್ಳೆಯ ಕಥೆ ನೀವೇ ಮಾಡಿ ಎಂದು ಅರ್ಜುನ್ ಜನ್ಯಗೆ ಶಿವಣ್ಣ ಅವರು ಹೇಳಿದ್ದರ ಫಲ 45 ಚಿತ್ರ. ನಮ್ಮಲ್ಲಿಯೂ ಉತ್ತಮ ನಿರ್ದೇಶಕರು ಇದ್ದಾರೆ ಎನ್ನುವುದನ್ನು ನಾನೂ ಏನೂ ಮಾಡದಿದ್ದಾಗ ಹೇಳಿದವರು ಶಿವಣ್ಣ. ಅವರಿಂದ ಎಷ್ಟು ಜನ ನಿರ್ದೇಶಕರು ಬಂದಿದ್ಧಾರೆ. ಕೆಲವರು ಸೂಪರ್ ಸ್ಟಾರ್ ಆಗಿದ್ದಾರೆ. ಶಿವಣ್ಣ ಅಪರಂಜಿ. ಅರ್ಜುನ್ ಜನ್ಯ ಸಂಗೀತದಲ್ಲಿ ಸಿನಿಮಾ ಸೂಪರ್ ಹಿಟ್ ಮಾಡ್ತಾರೆ. ಸಿನಿಮಾ ನಿರ್ದೇಶನ ಹೇಗೆ ಮಾಡಿರಬೇಕು ಊಹಿಸಿ ನೋಡಿ. ಅರ್ಜುನ್ ಜನ್ಯ ಅವರು ಬರೀ ಸಂಗೀತ ನಿರ್ದೇಶಕ ಮತ್ತು ನಿರ್ದೇಶಕ ಮಾತ್ರ ಅಲ್ಲ. ಒಳ್ಳೆಯ ನಟ ಕೂಡ.‌ ಪ್ರತಿಯೊಬ್ಬ ಕಲಾವಿದರಿಗೂ ಹೇಗೆ ನಟಿಸಬೇಕೆಂದು ಅವರು ಹೇಳುತ್ತಿರಲಿಲ್ಲ. ನಟಿಸಿ ತೋರಿಸುತ್ತಿದ್ದರು. ಇನ್ನೂ ಚಿತ್ರರಂಗಕ್ಕೆ ರಮೇಶ್ ರೆಡ್ಡಿ ಅವರಂತಹ ನಿರ್ಮಾಪಕರು ಬೇಕಾಗಿದ್ದಾರೆ. ಈ ಸಿನಿಮಾ ಖಂಡಿತಾ ಯಶಸ್ವಿಯಾಗುತ್ತದೆ. ಆದರೆ ರಾಜ್ ಬಿ ಶೆಟ್ಟಿ ಅವರು ಹೇಳಿದ ಹಾಗೆ ಮುಂದಿನ ಸಿನಿಮಾವನ್ನು ಅರ್ಜುನ್ ಜನ್ಯ ಅವರು ಇಲ್ಲೇ ಮಾಡಬೇಕು‌ ಎಂದರು.

ನಟ ರಾಜ್ ಬಿ. ಶೆಟ್ಟಿ ಮಾತನಾಡಿ, ಶಿವಣ್ಣ ಮತ್ತು ಉಪೇಂದ್ರ ಎನ್ನುವ ಇಬ್ಬರು ಸೂಪರ್ ಸ್ಟಾರ್ ಇದ್ದಾರೆ. ಚಿತ್ರದಲ್ಲಿ ನಾನೊಬ್ಬ ಕಲಾವಿದ ಅಷ್ಟೇ. ಶಿವಣ್ಣ ಮತ್ತು ಉಪೇಂದ್ರ ಅವರು ತೆರೆಯ ಮೇಲೆ ಬರವಾಗ ಅವರ ಮದ್ಯೆ ಕುಳಿತು ವಿಷಲ್ ಹಾಕುವುದು ನನ್ನ ಭಾಗ್ಯ. ಚಿತ್ರದಲ್ಲಿ ನಟಿಸಿ ಎಂದಾಗ ಅದರಿಂದ ತಪ್ಪಿಸಿಕೊಳ್ಳಲು ನಿರ್ದೇಶಕ ಅರ್ಜುನ್ ಜನ್ಯ ಅವರನ್ನು ಕನ್ವಿನ್ಸ್ ಮಾಡಿದೆ. ಬೇರೆ ಯಾರನಾದರೂ ಹಾಕಿಕೊಳ್ಳಿ ಎಂದು ಕೇಳಿಕೊಂಡೆ. ನನ್ನನ್ನು ಒಪ್ಪಿಕೊಂಡಿದ್ದು ನನ್ನ ಭಾಗ್ಯ. ಒಳ್ಳೆಯ ಕನ್ನಡ ಸಿನಿಮಾವನ್ನು ಕನ್ನಡದವರ ಜೊತೆಗೆ ಹೊರಗಿನ ಮಂದಿಯೂ ನೋಡಬೇಕು ಎನ್ನುವ ಆಸೆ ನನ್ನದು. ಅರ್ಜುನ್ ಜನ್ಯ ಅವರು ಮುಂದಿನ ಸಿನಿಮಾ ಬೇರೆ ಭಾಷೆಯಲ್ಲಿ ನಿರ್ದೇಶನ ಮಾಡದ್ದೆ, ಕನ್ನಡದಲ್ಲಿಯೇ ಮಾಡಬೇಕು. ಅರ್ಜುನ್ ಜನ್ಯ ಅವರ ನಿರ್ದೇಶನದ ವೈಖರಿ ನಿಜಕ್ಕೂ ಶ್ಲಾಘನೀಯ ಎಂದರು.

ಚಿತ್ರದಲ್ಲಿರುವ ಪ್ರತಿ ಪಾತ್ರಕ್ಕೂ ಡಬ್ ಮಾಡಿ ಇದೇ ರೀತಿ ಬರಬೇಕು ಎಂದು ತೋರಿಸುತ್ತಿದ್ದರು‌. ನಿರ್ಮಾಪಕರು ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಣ ಮಾಡಿದ್ದಾರೆ. ನಾನು ಸ್ಟಾರ್ ನಟರ ಸಿನಿಮಾದಲ್ಲಿ ನಟಿಸಿದ್ದೇನೆ ಎಂದು ಅನಿಸಲಿಲ್ಲ. ಚೆನ್ನಾಗಿ ನಟಿಸಲು ಪ್ರೋತ್ಸಾಹಿಸಿದವರು ಶಿವಣ್ಣ ಮತ್ತು ಉಪೇಂದ್ರ ಅವರು ಎಂದು ನಟ ರಾಜ್ ಬಿ ಶೆಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದರು.

ನಿರ್ದೇಶಕ ಅರ್ಜುನ್ ಜನ್ಯ ಮಾತನಾಡಿ, ಈ ಚಿತ್ರ ಆಗಲು ಮುಖ್ಯ ಕಾರಣ ಶಿವಣ್ಣ. ಸಿನಿಮಾ ನಾವು ಅಂದು ಕೊಂಡ ಹಾಗೆ ಬರಲು ಕಾರಣ ನಿರ್ಮಾಪಕ ರಮೇಶ್ ರೆಡ್ಡಿ. ಅವರು ದುಡ್ಡಿನ ಮುಖ ನೋಡಿಲ್ಲ. ಚಿತ್ರ ಚೆನ್ನಾಗಿ ಮೂಡಿಬರಬೇಕೆಂಬ ಆಸೆ ಅಷ್ಟೇ ಅವರಿಗೆ. “45” ಎನ್ನುವ ಶೀರ್ಷಿಕೆಯನ್ನು ಸುಮ್ಮನೆ ಇಟ್ಟಿಲ್ಲ. ಚಿತ್ರದ ಟೀಸರ್ ನಲ್ಲಿ ಕಥೆ ಹೇಳುವ ಪ್ರಯತ್ನ ಮಾಡಿದ್ದೇವೆ. ಅದು ಏನು ಎನ್ನುವುದನ್ನು ಪ್ರೇಕ್ಷಕರೇ ಗೆಸ್ ಮಾಡಲಿ. ಚಿತ್ರದಲ್ಲಿ ಗ್ರಾಫಿಕ್ ಕೆಲಸ ಹೆಚ್ಚಿಗೆ ಇದ್ದು ಕೆನಡಾದಲ್ಲಿ ಪರಿಣಿತ ತಂತ್ರಜ್ಞರ ತಂಡದಿಂದ ಸಿಜಿ ಕೆಲಸ ನಡೆಯುತ್ತಿದೆ. ಆಗಸ್ಟ್ 15 ಚಿತ್ರ ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಮತ್ತೊಂದು ಟೀಸರ್, ಹಾಡುಗಳು ಹಾಗೂ ಟ್ರೇಲರ್ ಅನ್ನು ವಿಭಿನ್ನವಾಗಿ ಅನಾವರಣ ಮಾಡುವ ಯೋಚನೆ ಇದೆ. ಶಿವಣ್ಣ, ಉಪೇಂದ್ರ, ರಾಜ್ ಬಿ ಶೆಟ್ಟಿ ಅವರು ಸೇರಿದಂತೆ ಎಲ್ಲಾ ಕಲಾವಿದರ ಹಾಗೂ ತಂತ್ರಜ್ಞರ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬರುತ್ತಿದೆ. ಚಿತ್ರದಲ್ಲಿ “ಓಂ” ಚಿತ್ರದ ಬಗ್ಗೆ ಬಳಸಲು ಅವಕಾಶ ಮಾಡಿಕೊಟ್ಟ ಉಪೇಂದ್ರ ಅವರಿಗೆ, ಅದಕ್ಕೆ ಸಹಕಾರ ನೀಡಿದ ಶಿವಣ್ಣ ಅವರಿಗೆ ಹಾಗೂ ಜೊತೆಗೆ ಹಂಸಲೇಖ ಅವರಿಗೆ ನಾನು ಅಬಾರಿ ಎಂದರು.

ಹಬ್ಬದ ದಿನವೂ ನಮ್ಮ ಚಿತ್ರದ ಟೀಸರ್ ಬಿಡುಗಡೆಗೆ ಬಂದಿರುವ ಪ್ರತಿಯೊಬ್ಬರಿಗೂ ಧನ್ಯವಾದ ಎಂದು ಮಾತನಾಡಿದ ನಿರ್ಮಾಪಕ ರಮೇಶ್ ರೆಡ್ಡಿ, ಚಿತ್ರ ಮೂಡಿ ಬಂದಿರುವ ಪರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನನಗೆ ತಿಳಿದ ಹಾಗೆ ಈ ರೀತಿಯ ಸಿನಿಮಾ ಭಾರತದಲ್ಲಿಯೇ ಈವರೆಗೂ ಬಂದಿಲ್ಲ. ಮೊದಲಿನಿಂದಲೂ ನಮ್ಮ ಚಿತ್ರಕ್ಕೆ ನೀವೆಲ್ಲಾ ನೀಡುತ್ತಾ ಬಂದಿರುವ ಪ್ರೋತ್ಸಾಹ ಮುಂದೆಯೂ ಮುಂದುವರೆಯಲಿ ಎಂದರು.
ಛಾಯಾಗ್ರಾಹಕ ಸತ್ಯ ಹೆಗಡೆ, ನಿರ್ಮಾಪಕ ಕೆ.ಮಂಜು, ಸಂಜಯ್ ಗೌಡ, ಇಂದ್ರಜಿತ್ ಲಂಕೇಶ್, ಕೆ.ವಿ.ಎನ್ ಸುಪ್ರೀತ್, ಆನಂದ್ ಆಡಿಯೋ ಶ್ಯಾಮ್ , ಶ್ರೇಯಸ್ ಮಂಜು ಸೇರಿದಂತೆ ಹಲವರು ಇದ್ದರು.

Tags: 45 MovieRaj B ShettyShivannaUpendraYugadi
SendShareTweet
Previous Post

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

Next Post

11ರ ಬಳಗದಿಂದ ರೋಹಿತ್ ಔಟ್!

Related Posts

Kamal Hassan
ಸಿನಿಮಾ-ಮನರಂಜನೆ

ಕಮಲ್ ಹಾಸನ್ ಪ್ರಕರಣ; ಜೂ. 20ಕ್ಕೆ ವಿಚಾರಣೆ ಮುಂದೂಡಿಕೆ

ಥಗ್ ಲೈಫ್ ಸಿನಿಮಾ ರಿಲೀಸ್ ವಿಚಾರ; ಕೋರ್ಟ್ ನಲ್ಲಿ ಏನಾಯಿತು?
ಸಿನಿಮಾ-ಮನರಂಜನೆ

ಥಗ್ ಲೈಫ್ ಸಿನಿಮಾ ರಿಲೀಸ್ ವಿಚಾರ; ಕೋರ್ಟ್ ನಲ್ಲಿ ಏನಾಯಿತು?

ಟೀಸರ್ ನಲ್ಲೇ ಮೋಡಿ ಮಾಡಿದ “ಎಲ್ಟು ಮುತ್ತಾ” .
ಸಿನಿಮಾ-ಮನರಂಜನೆ

ಟೀಸರ್ ನಲ್ಲೇ ಮೋಡಿ ಮಾಡಿದ “ಎಲ್ಟು ಮುತ್ತಾ” .

ಡಾ. ರಾಜ್ ಅಭಿನಯದ ಚಿತ್ರ RR77 ಚಿತ್ರದ ಬಗ್ಗೆ ತಂಡ ಏನಂತು?
ಸಿನಿಮಾ-ಮನರಂಜನೆ

ಡಾ. ರಾಜ್ ಅಭಿನಯದ ಚಿತ್ರ RR77 ಚಿತ್ರದ ಬಗ್ಗೆ ತಂಡ ಏನಂತು?

“ದೂರ ತೀರ ಯಾನ”ದ ಶೀರ್ಷಿಕೆ ಗೀತೆ
ಸಿನಿಮಾ-ಮನರಂಜನೆ

“ದೂರ ತೀರ ಯಾನ”ದ ಶೀರ್ಷಿಕೆ ಗೀತೆ

ಯಶಸ್ಸಿನ ಉತ್ತುಂಗಕ್ಕೇರುತ್ತಿದ್ದಂತೆ ಬದಲಾಯ್ತಾ ಜೀವನ ಶೈಲಿ? ಮಾದಕ ಕಂಠದ ಗಾಯಕಿ ಮಾದಕ ಲೋಕದಲ್ಲಿ ತೇಲ್ತಿದ್ದಾಳಾ?
ಸಿನಿಮಾ-ಮನರಂಜನೆ

ಯಶಸ್ಸಿನ ಉತ್ತುಂಗಕ್ಕೇರುತ್ತಿದ್ದಂತೆ ಬದಲಾಯ್ತಾ ಜೀವನ ಶೈಲಿ? ಮಾದಕ ಕಂಠದ ಗಾಯಕಿ ಮಾದಕ ಲೋಕದಲ್ಲಿ ತೇಲ್ತಿದ್ದಾಳಾ?

Next Post
11ರ ಬಳಗದಿಂದ ರೋಹಿತ್ ಔಟ್!

11ರ ಬಳಗದಿಂದ ರೋಹಿತ್ ಔಟ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಊಟಕ್ಕಾಗಿ ಜನ ರಂಪಾಟ..

ಊಟಕ್ಕಾಗಿ ಜನ ರಂಪಾಟ..

ಧಾರಾಕಾರ ಮಳೆ.. ಕುಸಿದ ಚಂದ್ರದ್ರೋಣ ಗುಡ್ಡ..!

ಧಾರಾಕಾರ ಮಳೆ.. ಕುಸಿದ ಚಂದ್ರದ್ರೋಣ ಗುಡ್ಡ..!

Recent News

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಊಟಕ್ಕಾಗಿ ಜನ ರಂಪಾಟ..

ಊಟಕ್ಕಾಗಿ ಜನ ರಂಪಾಟ..

ಧಾರಾಕಾರ ಮಳೆ.. ಕುಸಿದ ಚಂದ್ರದ್ರೋಣ ಗುಡ್ಡ..!

ಧಾರಾಕಾರ ಮಳೆ.. ಕುಸಿದ ಚಂದ್ರದ್ರೋಣ ಗುಡ್ಡ..!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat