ಬೆಂಗಳೂರು: ಮಾಜಿ ಐಪಿಎಸ್ ಅಧಿಕಾರಿ ಓಂ ಪ್ರಕಾಶ್ ಹತ್ಯೆಗೆ ಕಾರಣವಾಗಿರುವ ಅವರ ಪತ್ನಿ ಸ್ಕಿಜೋಫ್ರೇನಿಯ(Schizophrenia) ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಅವರು ಕಳೆದ 12 ವರ್ಷಗಳಿಂದ Schizophrenia ಮಾನಸಿಕ ಖಾಯಿಲೆಯಿಂದ ಚಿಕಿತ್ಸೆ ಪಡೆಯುತ್ತಿದ್ದರು. ಈ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಸದಾ ಭ್ರಮೆಯ ಸ್ಥಿತಿಯಲ್ಲಿ ಇರುತ್ತಿದ್ದರು ಎನ್ನಲಾಗಿದೆ. ಯಾವುದೋ ವಿಚಾರ ಕಲ್ಪಿಸಿಕೊಂಡು ಆತಂಕ ಪಡುತ್ತಿದ್ದರು. ಇದೆ ಖಾಯಿಲೆಯಿಂದಾಗಿ ಪತಿಯ ಮೇಲೆ ಇಲ್ಲ ಸಲ್ಲದ ಊಹೆ ಮಾಡಿಕೊಂಡು ಶಂಕೆ ವ್ಯಕ್ತಪಡಿಸುತ್ತಿದ್ದರು. ಗನ್ ಹಿಡಿದುಕೊಂಡು ಭಯ ಪಡಿಸ್ತಾ ಇದ್ದಾರೆ ಅಂತ ಸಂಬಂಧಿಕರಿಗೆ ಹಲವು ಬಾರಿ ಹೇಳುತ್ತಿದ್ದರು. ಈ ಬಗ್ಗೆ ಫ್ಯಾಮಿಲಿ ಗ್ರೂಪ್ ನಲ್ಲಿ ಮೆಸೇಜ್ ಕೂಡ ಮಾಡಿದ್ದರು. ಐಪಿಎಸ್ ಅಧಿಕಾರಿಗಳ ಗ್ರೂಪ್ ನಲ್ಲಿ ಕೂಡ ಮೆಸೇಜ್ ಕೂಡ ಮಾಡುತ್ತಿದ್ದರು ಎನ್ನಲಾಗಿದೆ.
ಚಾಕು ಇರಿದು ಓಂ ಪ್ರಕಾಶ್ ಅವರನ್ನು ಪತ್ನಿ ಹತ್ಯೆ ಮಾಡಿದ್ದಾರೆ. ಪ್ರಾಥಮಿಕ ತನಿಖೆ ವೇಳೆ 8 ರಿಂದ 10 ಬಾರಿ ಚಾಕುವಿನಿಂದ ಇರಿದಿದ್ದರು ಎಂದು ತಿಳಿದು ಬಂದಿದೆ. ಎದೆ, ಹೊಟ್ಟೆ ಹಾಗೂ ಕೈ ಭಾಗಕ್ಕೆ ಚಾಕುವಿನಿಂದ ಇರಿದಿದ್ದಾರೆ. ಹೊಟ್ಟೆ ಭಾಗಕ್ಕೆ ಸುಮಾರು ನಾಲ್ಕರಿಂದ ಐದು ಬಾರಿ ಚಾಕು ಇರಿದಿದ್ದಾಳೆ. ಹೊಟ್ಟೆ ಭಾಗಕ್ಕೆ ಹೆಚ್ಚು ಚಾಕು ಇರಿದ ಕಾರಣ ತೀವ್ರ ರಕ್ತಸ್ರಾವವಾಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಸುಮಾರು 15 ರಿಂದ 20 ನಿಮಿಷಗಳ ಕಾಲ ಓಂ ಪ್ರಕಾಶ್ ಒದ್ದಾಡಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ವೇಳೆ ಗಂಡನ ನರಳಾಟ ನೋಡುತ್ತಾ ಪತ್ನಿ ನಿಂತಿದ್ದರು ಎನ್ನಲಾಗಿದೆ. ಪತಿ ಸಾವನ್ನಪ್ಪಿದ ನಂತರ ಐಪಿಎಸ್ ಅಧಿಕಾರಿ ಪತ್ನಿಗೆ ಕಾಲ್ ಮಾಡಿ ಪತ್ನಿ ಪಲ್ಲವಿ ಕೊಲೆ ಮಾಡಿರುವ ವಿಚಾರ ತಿಳಿಸಿದ್ದಾರೆ. ಅಲ್ಲದೇ, ಎಚ್ ಎಸ್ ಆರ್ ಲೇಔಟ್ ಪೊಲೀಸರಿಗೆ ಕಾಲ್ ಮಾಡಿದ್ದಾರೆ. ಓಂ ಪ್ರಕಾಶ್ ಹಾಗೂ ಪತ್ನಿ ವಾಸಿಸುತ್ತಿದ್ದ ಎರಡನೇ ಮಹಡಿಯಲ್ಲಿ ಮಗಳು ವಾಸಿಸುತ್ತಿದ್ದಳು. ಮೂರನೇ ಮಹಡಿಯಲ್ಲಿ ಮಗ ಹಾಗೂ ಸೊಸೆ ವಾಸಿಸುತ್ತಿದ್ದಳು. ಕೆಳಮಹಡಿಯಲ್ಲಿ ಓಂ ಪ್ರಕಾಶ್ ಹಾಗೂ ಪತ್ನಿ ವಾಸಿಸುತ್ತಿದ್ದರು. ಸೊಸೆ ಹಾಗೂ ಮಗ ಊಟಕ್ಕೆ ಹೋದ ಸಮಯದಲ್ಲಿ ಹತ್ಯೆಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.