ನವದೆಹಲಿ: ಈ ಬಾರಿ ಮುಂಗಾರು ಮಳೆ ರಾಜ್ಯಕ್ಕೆ ಬೇಗ ಆವರಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರತಿ ವರ್ಷ ಜನ್ ತಿಂಗಳ ಆರಂಭದಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶ ಮಾಡುತ್ತಿತ್ತು. ಆದರೆ, ಈ ಬಾರಿ ಮುಂದಿನ ನಾಲ್ಕೈದು ದಿನಗಳಲ್ಲಿ ನೈಋತ್ಯ ಮಾನ್ಸೂನ್ (Monsoon 2025) ಕೇರಳಕ್ಕೆ ಆಗಮಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ. ಮೇ 27ರ ವೇಳೆಗೆ ಮಾನ್ಸೂನ್ ಕೇರಳವನ್ನು ತಲುಪುತ್ತದೆ ಎಂದು ನಿರೀಕ್ಷಿಸಿತ್ತು.
“ಪ್ರಸ್ತುತ ಇರುವ ವೇಗದಲ್ಲಿಯೇ ಮಳೆ ಮುಂದುವರೆದರೆ ಮತ್ತು ಇತರ ಪರಿಸ್ಥಿತಿಗಳು ಅನುಕೂಲಕರವಾಗಿದ್ದರೆ ಕೇರಳದಲ್ಲಿ ಮಾನ್ಸೂನ್ ಆರಂಭಕ್ಕೆ ಪರಿಸ್ಥಿತಿಗಳು ಅನುಕೂಲಕರವಾಗುವ ಸಾಧ್ಯತೆಯಿದೆ” ಎಂದು ಐಎಂಡಿ ಅಧಿಕಾರಿಗಳು ಅಭಿಪ್ರಾಯ ಪಡುತ್ತಿದ್ದಾರೆ.
ಈ ವರ್ಷ ದೇಶಾದ್ಯಂತ ನೈಋತ್ಯ ಮಾನ್ಸೂನ್ ಋತುಮಾನದ ಮಳೆ ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ. ಮೇ 22ರ ವರೆಗೆ ಕರ್ನಾಟಕದ ಕರಾವಳಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ಉಂಟಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕೇರಳ, ಕರ್ನಾಟಕ ಮತ್ತು ಮಹಾರಾಷ್ಟ್ರದ ಕರಾವಳಿ ಪ್ರದೇಶಗಳು ರೆಡ್ ಅಲರ್ಟ್ ಘೋಷಿಸಲಾಗಿದೆ.