ಬೆಂಗಳೂರು: ನಿವೃತ್ತ ಡಿಜಿ ಡಿಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿಚಾರಣೆಯಲ್ಲಿ ಸ್ಫೋಟಕ ಮಾಹಿತಿ ಹೊರ ಬಿದ್ದಿವೆ.
ಕೊಲೆ ಆರೋಪಿ ಪಲ್ಲವಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದು, ಕಳೆದ ಒಂದು ವಾರದಿಂದ ಮನೆಯಲ್ಲಿ ಜಗಳ ನಡೆಯುತ್ತಿತ್ತು. ಪದೇ ಪದೇ ಗನ್ ತಂದು ನನಗೆ ಮತ್ತು ನನ್ನ ಮಗಳಿಗೆ ಶೂಟ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದರು.
ಬೆಳಗ್ಗೆಯಿಂದ ಬೇರೆ ಬೇರೆ ವಿಚಾರಕ್ಕೆ ಮನೆಯಲ್ಲಿ ಜಗಳ ಶುರುವಾಗಿತ್ತು. ಮಧ್ಯಾಹ್ನ ಜಗಳ ವಿಕೋಪಕ್ಕೆ ಹೋದಾಗ ನಮ್ಮನ್ನೇ ಕೊಲೆ ಮಾಡಲು ಓಂಪ್ರಕಾಶ್ ಯತ್ನ ನಡೆಸಿದರು. ಈ ವೇಳೆ ನಮ್ಮನ್ನು ಉಳಿಸಿಕೊಳ್ಳಲು ನಾವು ಹೋರಾಟ ಮಾಡಿದೇವು. ನಂತರ ಓಂಪ್ರಕಾಶ್ ಮೇಲೆ ಖಾರದ ಪುಡಿ ಹಾಗೂ ಅಡುಗೆ ಆಯಿಲ್ ನ್ನು ಪಲ್ಲವಿ ಸುರಿದಿದ್ದಾರೆ. ನಂತರ ಓಂಪ್ರಕಾಶ್ ಕೈಕಾಲು ಕಟ್ಟಿ ಅಡುಗೆ ಮನೆಯಲ್ಲಿದ್ದ ಚಾಕುವಿನಿಂದ ಚುಚ್ಚಿರುವುದಾಗಿ ಪಲ್ಲವಿ ಹೇಳಿದ್ದಾರೆಂಬುವುದು ಉನ್ನತ ಮೂಲಗಳಿಂದ ತಿಳಿದು ಬ ದಿದೆ.
ನಂತರ ತೀವ್ರ ರಕ್ತಸ್ರಾವದಿಂದ ಓಂ ಪ್ರಕಾಶ್ ಸಾವನ್ನಪ್ಪಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣದಲ್ಲಿ ಪತ್ನಿ ಪಲ್ಲವಿ A-1 ಆರೋಪಿ ಆಗಲಿದ್ದಾರೆ. ಪ್ರಕರಣದಲ್ಲಿ ಓಂಪ್ರಕಾಶ್ ಮಗಳ ಪಾತ್ರದ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ಪತ್ನಿ ಪಲ್ಲವಿ ಹಾಗೂ ಪುತ್ರಿಯನ್ನು ಪೊಲೀಸರು ವಶಕ್ಕೆ ಪೆಡದಿದ್ದಾರೆ. ಡಿಸಿಪಿ ಸಾ.ರಾ ಫಾತೀಮಾ ವಿಚಾರಣೆ ನಡೆಸುತ್ತಿದ್ದಾರೆ.