ಬೆಂಗಳೂರು: ಹೆಮ್ಮಿಗೆಪುರದಲ್ಲಿ ನಡೆದ ಮಹಿಳೆಯ ಕೊಲೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಕೈಗೊಂಡಿದ್ದು, ಪತಿ ತಲೆ ಮರೆಸಿಕೊಂಡಿದ್ದಾನೆ.
ಬೆಂಗಳೂರಿನ ಹೆಮ್ಮಿಗೆಪುರದಲ್ಲಿ ಈ ಘಟನೆ ನಡೆದಿದೆ. ಮಹಿಳೆಯನ್ನು ಪತಿ ಸುತ್ತಿಗೆಯಲ್ಲಿ ಹೊಡೆದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಪತಿ ಶ್ರೀರಾಮ್ ಕೊಲೆ ಮಾಡಿರುವ ಆರೋಪಿ. ಭಾಗ್ಯ ಕೊಲೆಯಾಗಿರುವ ಪತ್ನಿ. ಪತಿ ಹಾಗೂ ಪತ್ನಿಯ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ ಎನ್ನಲಾಗಿದೆ.
ಸ್ಥಳಕ್ಕೆ ತಲಘಟ್ಟಪುರ ಪೊಲೀಸರು, FSL ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಕೊಲೆ ಮಾಡಿ ಪತಿ ಶ್ರೀರಾಮ್ ಪರಾರಿಯಾಗಿದ್ದಾನೆ.
ಆರೋಪಿ ಶ್ರೀರಾಮ್ ಗೆ ಕುಡಿತದ ಚಟ ಇತ್ತು. ಕಳೆದ 15 ದಿನಗಳ ಹಿಂದಷ್ಟೆ ರಿಯ್ಯಾಬ್ ನಿಂದ ಶ್ರೀರಾಮ್ ಬಂದಿದ್ದ. ಮೂರು ದಿನಗಳ ಹಿಂದೆಯಷ್ಟೇ ಶ್ರೀರಾಮ್ ತಾಯಿಯೂ ಸಾವನ್ನಪ್ಪಿದ್ದರು. ಶ್ರೀರಾಮ್ ಸದಾ ಮನೆಯಲ್ಲಿ ಜಗಳವಾಡುತ್ತಿದ್ದ. ಇಂದು ಕೂಡ ಕುಡಿದು ಬಂದು ಗಲಾಟೆ ಮಾಡಿದ್ದ ಎನ್ನಲಾಗಿದೆ. ಈ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.