ಹಾಸನ ಜಿಲ್ಲೆಯ ಕಾಡಂಚಿನ ಗ್ರಾಮಗಳಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದೆ. ಗಜಪಡೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಗಜಪಡೆ ಕಾಫಿ, ಬಾಳೆ, ಸೇರಿ ಕೃಷಿ ಉಪಕರಣ ನಾಶ ಮಾಡಿದೆ. ಸಕಲೇಶಪುರ ತಾಲ್ಲೂಕಿನ ಗೊದ್ದು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಆನಂದ್ ಎಂಬುವವರಿಗೆ ಸೇರಿದ ಕಾಫಿ ತೋಟಕ್ಕೆ ನುಗ್ಗಿದ್ದ ಕಾಡಾನೆಗಳು ಸಂಪೂರ್ಣವಾಗಿ ಕಾಫಿ ತೋಟವನ್ನು ನಾಶ ಮಾಡಿವೆ.
ಫಸಲು ಬಿಟ್ಟಿದ್ದ ಕಾಫಿ ಗಿಡಗಳು, ಗೊನೆ ಬಿಟ್ಟಿದ್ದ ಬಾಳೆ, ನೀರಿನ ಪೈಪ್ಗಳನ್ನು ಸಂಪೂರ್ಣ ನಾಶ ಮಾಡಿವೆ. ಹತ್ತಾರು ವರ್ಷಗಳಿಂದ ಕಷ್ಟಪಟ್ಟು ಬೆಳೆದಿದ್ದ ಕಾಫಿ ಗಿಡಗಳನ್ನು ಕಳೆದುಕೊಂಡ ರೈತ ಈಗ ಕಂಲಾಗಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಆಗಮಿಸಿ ಪರಿಹಾರ ಒದಗಿಸುವಂತೆ ಒತ್ತಾಯಿಸಿದ್ದಾರೆ.