ಮಹಿಳೆಗೆ ಕಾರು ಡಿಕ್ಕಿ ಹೊಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಟ ಯುವ ರಾಜಕುಮಾರ್ ಕ್ಷಮೆ ಕೋರಿದ್ದಾರೆ.
ಎಕ್ಕ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಪಘಾತದ ಘಟನೆಗೆ ಪಶ್ಚಾತ್ತಾಪ ಪಟ್ಟಿದ್ದು, ಮಹಿಳೆ ಬಳಿ ಕ್ಷಮೆ ಕೇಳಿದ್ದಾರೆಂಬ ವಿಷಯಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದಾರೆ. ನೊಂದು ಕ್ಷಮೆಯನ್ನೂ ಯಾಚಿಸಿರುವುದಾಗಿ ಹೇಳಿದ್ದಾರೆ.
ಯುವ ರಾಜ್ಕುಮಾರ್ ನಟನೆಯ ಎರಡನೇ ಚಿತ್ರ `ಎಕ್ಕ’ ಸಿನಿಮಾ ಟೀಮ್ ಪ್ರಚಾರಕ್ಕೆಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ತೆರಳಿದ್ದ ವೇಳೆ ದುರ್ಘಟನೆ ನಡೆದಿತ್ತು. ಪ್ರಚಾರದ ವೇಳೆ ಸಿದ್ದಗಂಗಾ ಮಠಕ್ಕೆ ನಟ ಯುವ ರಾಜ್ಕುಮಾರ್ ಹಾಗೂ ಇತರರು ಭೇಟಿ ನೀಡಿದ್ದರು. ಆ ಸ್ಥಳದಲ್ಲಿ ಭಾರೀ ಜನಸಂದಣಿ ಏರ್ಪಟ್ಟಿತ್ತು. ಆಗ ನಡೆದ ತಳ್ಳಾಟ ನೂಕಾಟದಲ್ಲಿ ಯುವ ರಾಜಕುಮಾರ್ ಕುಳಿತಿದ್ದ ಕಾರು ಮಹಿಳೆಯ ಕಾಲ ಮೇಲೆ ಹರಿದಿತ್ತು. ಹೀಗಾಗಿ ಮಹಿಳೆಯ ಕಾಲಿಗೆ ಪೆಟ್ಟಾಗಿತ್ತು. ಘಟನೆ ನಡೆದ ಮೂರು ದಿನಗಳ ನಂತರ ನಟನಿಗೆ ಗೊತ್ತಾಗಿದ್ದು, ಗಾಯಗೊಂಡ ಮಹಿಳೆಗೆ ಎಲ್ಲಾ ಸೌಕರ್ಯ ಮಾಡಿಕೊಡಲಾಗಿದೆ. ಆಗಿರುವ ಪ್ರಮಾದಕ್ಕೆ ನಾನು ನಾನು ಕ್ಷಮೆ ಕೇಳುತ್ತೇನೆ ಎಂದಿದ್ದಾರೆ.